ಪ್ರೀತಿ, ಮದುವೆ, ಎಸ್ಕೇಪ್.. ಕೈಕೊಟ್ಟ ಪ್ರಿಯಕರ ಪೊಲೀಸರ ಬಲೆಗೆ
x

ಯುವತಿಯ ಮೇಲೆ ದೌರ್ಜನ್ಯ ಎಸಗಿ ಕೈಬಿಟ್ಟ ಆರೋಪಿ ಹರೀಶ್ ಬಂಧನ

ಪ್ರೀತಿ, ಮದುವೆ, ಎಸ್ಕೇಪ್.. ಕೈಕೊಟ್ಟ ಪ್ರಿಯಕರ ಪೊಲೀಸರ ಬಲೆಗೆ

ಬೆಂಗಳೂರಿನಲ್ಲಿ ಪ್ರೀತಿಯ ಹೆಸರಿನಲ್ಲಿ ಯುವತಿಗೆ ವಂಚಿಸಿ, ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾದಾಗ ಕೈಬಿಟ್ಟಿದ್ದ ಹರೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


Click the Play button to hear this message in audio format

ಪ್ರೀತಿಯ ಹೆಸರಿನಲ್ಲಿ ನಂಬಿಸಿ ಅಪ್ರಾಪ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆ ಗರ್ಭಿಣಿಯಾದ ವಿಷಯ ತಿಳಿಯುತ್ತಿದ್ದಂತೆ ನಾಪತ್ತೆಯಾಗಿದ್ದ ಹರೀಶ್ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ನಗರದ ಪ್ರಿ-ಯೂನಿವರ್ಸಿಟಿ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸಂತ್ರಸ್ತೆಯನ್ನು ಈತ ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಪರಿಚಯ ಬೆಳೆಸಿಕೊಂಡಿದ್ದ. ಈ ಪರಿಚಯ ಪ್ರೇಮಕ್ಕೆ ತಿರುಗಿ, ಕಳೆದ ವರ್ಷದ ಮೇ ತಿಂಗಳಿನಲ್ಲಿ ಇಬ್ಬರೂ ವಿವಾಹವಾಗಿದ್ದರು. ಮದುವೆಯ ನಂತರ ದಾಸರಹಳ್ಳಿ ಮೆಟ್ರೋ ನಿಲ್ದಾಣದ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿಗಳ ನಡುವೆ ಕಿರಿಕಿರಿ ಉಂಟಾಗಿದ್ದು, ಆರೋಪಿಯು ಸಂತ್ರಸ್ತೆಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಸಂತ್ರಸ್ತೆಯು ನಾಲ್ಕು ತಿಂಗಳ ಗರ್ಭಿಣಿಯಾದ ಸಂದರ್ಭದಲ್ಲಿ ಹರೀಶ್ ಆಕೆಯನ್ನು ಬಿಟ್ಟು ನಾಪತ್ತೆಯಾಗಿದ್ದ.

ಇದರಿಂದಾಗಿ ಯುವತಿ ತನ್ನ ತಾಯಿಯ ಮನೆಗೆ ಮರಳಿದ್ದು, ಏಪ್ರಿಲ್ 12 ರಂದು ಮಗುವಿಗೆ ಜನ್ಮ ನೀಡಿದ್ದಳು. ಆದರೆ ಆರೋಗ್ಯದ ಸಮಸ್ಯೆಯಿಂದಾಗಿ ಮಗು ಜನಿಸಿದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿದೆ. ಈ ಸಂಬಂಧ ಸಂತ್ರಸ್ತೆಯು ನೀಡಿದ ವಂಚನೆ, ದೌರ್ಜನ್ಯ ಮತ್ತು ಕೈಬಿಟ್ಟಿರುವ ದೂರಿನ ಆಧಾರದ ಮೇಲೆ ಪೊಲೀಸರು ಹರೀಶ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕುಡಿತದ ವ್ಯಸನಿಯಾಗಿದ್ದ ಮಗನನ್ನು ಕೊಂದ ತಾಯಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ದಿನನಿತ್ಯದ ಕಿರುಕುಳದಿಂದ ಬೇಸತ್ತ ತಾಯಿಯೊಬ್ಬರು ತನ್ನ 43 ವರ್ಷದ ಮಗನನ್ನೇ ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಎನ್.ಆರ್. ಮೊಹಲ್ಲಾ ನಿವಾಸಿ ರಮೇಶ (43) ಎಂದು ಗುರುತಿಸಲಾಗಿದೆ. ಈತನ ತಾಯಿ ಮಂಜುಳಾ ಅವರು ಬೇರೆಯವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ರಮೇಶ ತೀವ್ರವಾದ ಕುಡಿತದ ಚಟಕ್ಕೆ ಬಿದ್ದಿದ್ದು, ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಪ್ರತಿದಿನ ಕುಡಿಯಲು ಹಣ ನೀಡುವಂತೆ ಪೀಡಿಸುತ್ತಾ, ಹಣ ನೀಡದಿದ್ದಾಗ ತಾಯಿಗೆ ದೈಹಿಕ ಹಾಗೂ ಮಾನಸಿಕವಾಗಿ ತೀವ್ರ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.

ಮಗನ ದಿನನಿತ್ಯದ ಕಿರುಕುಳ ಮತ್ತು ಹಿಂಸೆಯನ್ನು ಸಹಿಸಿಕೊಳ್ಳಲು ಸಾಧ್ಯವಾಗದ ಮಂಜುಳಾ, ಈ ನರಕಯಾತನೆಯಿಂದ ಮುಕ್ತಿ ಪಡೆಯಲು ಅಂತಿಮ ನಿರ್ಧಾರಕ್ಕೆ ಬಂದರು. ಏಪ್ರಿಲ್ 25ರಂದು ಮಗನನ್ನು ಚಾಮುಂಡಿ ಬೆಟ್ಟದ ತಪ್ಪಲಿಗೆ ಕರೆದೊಯ್ದಿದ್ದಾರೆ. ಅಲ್ಲಿಯೂ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ಮಂಜುಳಾ ಅವರು ಅಲ್ಲೇ ಇದ್ದ ಕಲ್ಲಿನಿಂದ ಮಗನ ತಲೆಗೆ ಬಲವಾಗಿ ಹೊಡೆದಿದ್ದಾರೆ. ತೀವ್ರ ರಕ್ತಸ್ರಾವದಿಂದ ರಮೇಶ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Read More
Next Story