Shivarajkumar| ಬೇಲ್ ಸಿನಿಮಾದ ಫಸ್ಟ್ ಲುಕ್ ರಿಲೀಸ್‌- ಧೂಳೆಬ್ಬಿಸಿದ ಶಿವಣ್ಣ
x

ವರಮಹಾಲಕ್ಷ್ಮಿ ಹಬ್ಬಕ್ಕೆ ಹ್ಯಾಟ್ರಿಕ್ ಹೀರೋ ಶಿವಣ್ಣನ 'ಬೇಲ್' ಚಿತ್ರ ಬಿಡುಗಡೆಯಾಗಲಿದೆ. 

Shivarajkumar| 'ಬೇಲ್' ಸಿನಿಮಾದ ಫಸ್ಟ್ ಲುಕ್ ರಿಲೀಸ್‌- ಧೂಳೆಬ್ಬಿಸಿದ ಶಿವಣ್ಣ

ಹ್ಯಾಟ್ರಿಕ್ ಹೀರೊ ಶಿವರಾಜ್​​ಕುಮಾರ್ ನಟನೆಯ, ಪವನ್ ಒಡೆಯರ್ ನಿರ್ದೇಶನದ ಬಹುನಿರೀಕ್ಷಿತ 'ಬೇಲ್' ಸಿನಿಮಾ ವರಮಹಾಲಕ್ಷ್ಮಿ ಹಬ್ಬಕ್ಕೆ ಅದ್ಧೂರಿಯಾಗಿ ತೆರೆಕಾಣಲಿದೆ.


Click the Play button to hear this message in audio format

ಹ್ಯಾಟ್ರಿಕ್ ಹೀರೊ ಶಿವರಾಜ್​​ಕುಮಾರ್ ಅವರ ಮುಂಬುರುವ ಸಿನಿಮಾಗಳನ್ನು ವೀಕ್ಷಿಸಲು ಕೋಟ್ಯಂತರ ಪ್ರೇಕ್ಷಕರು ಕಾತರರಾಗಿದ್ದಾರೆ. ಸದ್ಯ ಹಲವು ಬಿಗ್ ಬಜೆಟ್ ಸಿನಿಮಾಗಳಲ್ಲಿ ಬಣ್ಣ ಹಚ್ಚುತ್ತಿರುವ ಸ್ಯಾಂಡಲ್​ವುಡ್​ ಸೆಂಚುರಿ ಸ್ಟಾರ್, ತಮ್ಮ ಮುಂಬುರುವ ಬಹುನಿರೀಕ್ಷಿತ 'ಬೇಲ್' ಸಿನಿಮಾ ಸಲುವಾಗಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ.

ಕನ್ನಡ ಚಿತ್ರರಂಗದ ಪ್ರಸಿದ್ಧ ಚಲನಚಿತ್ರ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ಮೂಡಿಬರುತ್ತಿದ್ದು, ಖ್ಯಾತ ನಿರ್ದೇಶಕ ಪವನ್ ಒಡೆಯರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಕೊನೆಯ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ, ಇದೀಗ ಸಿನಿಮಾದ ಫಸ್ಟ್ ಲುಕ್ ಹಾಗೂ ಆಕರ್ಷಕ ಟೀಸರ್ ಅನ್ನು ಅನಾವರಣಗೊಳಿಸಿದೆ. ಈ ಟೀಸರ್ ಇಂಟರ್ನೆಟ್‌ನಲ್ಲಿ ಧೂಳೆಬ್ಬಿಸುತ್ತಿದ್ದು, ಶಿವಣ್ಣ ಅವರ ಹೊಸ ಲುಕ್ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

ಈ ಶೀರ್ಷಿಕೆಯ ಸಿನಿಮಾದಲ್ಲಿ ಶಿವಣ್ಣ ಹಿಂದೆಂದೂ ಕಾಣದ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಲ್ಟ್ ಆ್ಯಂಡ್ ಪೆಪ್ಪರ್ ಲುಕ್​​ನಲ್ಲಿ ದರ್ಶನ ಕೊಟ್ಟಿರುವ ಶಿವಣ್ಣ, ಚಿತ್ರದಲ್ಲಿ 'ವಿಜಿ' ಎಂಬ ವಿಶಿಷ್ಟ ಪಾತ್ರಕ್ಕೆ ಜೀವ ತುಂಬುತ್ತಿದ್ದಾರೆ. ಬಿಡುಗಡೆಯಾಗಿರುವ ಟೀಸರ್‌ನಲ್ಲಿ ಕೊಡೆ ಹಿಡಿದು, ಸಾಕು ನಾಯಿಯ ಜೊತೆ ಶಿವಣ್ಣ ನಡೆದು ಬರುವ ಸ್ಟೈಲ್ ಪ್ರೇಕ್ಷಕರಿಗೆ ಖುಷಿ ಕೊಟ್ಟಿದೆ. ಇದರೊಂದಿಗೆ ನಟ ಸಾಯಿ ಕುಮಾರ್ ಹಾಗೂ ಶಿವಣ್ಣ ನಡುವಿನ ಡೈಲಾಗ್ ಜುಗಲ್‌ಬಂದಿ ಸಿನಿಮಾ ಮೇಲಿನ ಕುತೂಹಲವನ್ನು ಮತ್ತಷ್ಟು ದುಪ್ಪಟ್ಟುಗೊಳಿಸಿದೆ.

ಸುಮಾರು 1 ನಿಮಿಷ 52 ಸೆಕೆಂಡುಗಳ ಅವಧಿಯ ಈ ಟೀಸರ್ ಭಾರಿ ಮಳೆಯ ಬೆಂಗಳೂರಿನ ದೃಶ್ಯದೊಂದಿಗೆ ಪ್ರಾರಂಭವಾಗುತ್ತದೆ. ನಿಧಾನವಾಗಿ ನಾಯಿಗೆ ಬಿಸ್ಕೆಟ್ ತಿನ್ನಿಸುತ್ತಾ ವಿಜಿ ಪಾತ್ರದ ಪರಿಚಯವಾಗುತ್ತದೆ. ಬಳಿಕ ಬರುವ ಫೋನ್ ಕರೆಯಲ್ಲಿ, "ನೀನು ಹಚ್ಚಿರುವ ಬೆಂಕಿ ಬರಿ ಊರನ್ನಲ್ಲ, ಇಡೀ ದೇಶವನ್ನೇ ಸುಡ್ತಿದೆ" ಎಂಬ ಸಂಭಾಷಣೆಗೆ, "ಕೆಲವು ಸ್ವಭಾವಕ್ಕೆ ಧೈರ್ಯದ ಅಭಾವ ಯಾವತ್ತಿಗೂ ಆಗೋದಿಲ್ಲ" ಎಂದು ಶಿವಣ್ಣ ಹೊಡೆಯುವ ಖಡಕ್ ಡೈಲಾಗ್ ಅಭಿಮಾನಿಗಳಲ್ಲಿ ರೋಮಾಂಚನ ಉಂಟುಮಾಡಿದೆ.

ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕ ಪವನ್ ಒಡೆಯರ್ ಈ ಚಿತ್ರವನ್ನು ವಿಭಿನ್ನವಾಗಿ ಕಥೆ ಹೆಣೆದು ಕಟ್ಟಿಕೊಡುತ್ತಿದ್ದಾರೆ. ಚಿತ್ರಕ್ಕೆ ವೆಂಕಟ್ ಕೆ. ನಾರಾಯಣ್ ಬಂಡವಾಳ ಹೂಡಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಹಾಗೂ ವೈದ್ಯ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿರುವ 'ಬೇಲ್' ಸಿನಿಮಾ ಇದೇ ಸಾಲಿನ ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಪ್ರಕಟಿಸಿದೆ.

Read More
Next Story