ಮಗ ವಿನೀಶ್ ಅಪಘಾತ ವದಂತಿ ತಳ್ಳಿಹಾಕಿದ ವಿಜಯಲಕ್ಷ್ಮಿ
x

ಬೆಂಗಳೂರಿನ ಕಾರು ಅಪಘಾತ ವದಂತಿಗಳ ಬೆನ್ನಲ್ಲೇ ಮಗ ವಿನೀಶ್ ಸುರಕ್ಷಿತವಾಗಿದ್ದಾನೆ ಮತ್ತು ಆತ ಕಾರು ಚಲಾಯಿಸುತ್ತಿರಲಿಲ್ಲ ಎಂದು ವಿಜಯಲಕ್ಷ್ಮಿ ದರ್ಶನ್ ಸ್ಪಷ್ಟಪಡಿಸಿದ್ದಾರೆ.

ಮಗ ವಿನೀಶ್ ಅಪಘಾತ ವದಂತಿ ತಳ್ಳಿಹಾಕಿದ ವಿಜಯಲಕ್ಷ್ಮಿ

ಬೆಂಗಳೂರಿನಲ್ಲಿ ನಡೆದ ಸಣ್ಣ ರಸ್ತೆ ಅಪಘಾತದ ಬಳಿಕ ಮಗ ವಿನೀಶ್ ಸುರಕ್ಷಿತವಾಗಿದ್ದಾನೆ ಮತ್ತು ಆತ ಕಾರು ಚಲಾಯಿಸುತ್ತಿರಲಿಲ್ಲ ಎಂದು ವಿಜಯಲಕ್ಷ್ಮಿ ದರ್ಶನ್ ಸ್ಪಷ್ಟಪಡಿಸಿದ್ದಾರೆ.


Click the Play button to hear this message in audio format

ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಪುತ್ರ ವಿನೀಶ್ ಬೆಂಗಳೂರಿನಲ್ಲಿ ಭೀಕರ ಕಾರು ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳ ವದಂತಿಯನ್ನು ಅವರ ತಾಯಿ ವಿಜಯಲಕ್ಷ್ಮಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಸುದೀರ್ಘ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಗ ವಿನೀಶ್ ಸಂಪೂರ್ಣ ಸುರಕ್ಷಿತವಾಗಿದ್ದಾನೆ ಮತ್ತು ಆತ ಕಾರು ಚಲಾಯಿಸುತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ದರ್ಶನ್ ಕುಟುಂಬಕ್ಕೆ ಸೇರಿದ ಫೋರ್ಡ್ ಎಂಡೀವರ್ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಣ್ಣ ಮಟ್ಟದ ಅಪಘಾತ ನಡೆದಿತ್ತು. ಈ ವೇಳೆ ಕಾರಿನಲ್ಲಿದ್ದ ವಿನೀಶ್, ಬೈಕ್ ಸವಾರರ ಯೋಗಕ್ಷೇಮ ವಿಚಾರಿಸಲು ಕೆಳಗೆ ಇಳಿದಿದ್ದರು. ಈ ಸಂದರ್ಭದ ದೃಶ್ಯಗಳನ್ನು ಕೆಲವರು ತಪ್ಪಾಗಿ ಅರ್ಥೈಸಿ, ವಿನೀಶ್‌ಗೆ ದೊಡ್ಡ ಅಪಘಾತವಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು.

ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ವಿಜಯಲಕ್ಷ್ಮಿ, ನಮ್ಮ ಚಾಲಕನೇ ಕಾರು ಚಲಾಯಿಸುತ್ತಿದ್ದನು. ಬೆಂಗಳೂರಿನ ಸಂಚಾರ ದಟ್ಟಣೆಯಲ್ಲಿ ಇಂತಹ ಸಣ್ಣಪುಟ್ಟ ಘಟನೆಗಳು ಸಾಮಾನ್ಯ. ಎದುರಿನ ದ್ವಿಚಕ್ರ ವಾಹನ ಸವಾರರೇ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ. ಆದರೆ ಮಗ ಕೇವಲ ಮಾನವೀಯತೆಯ ದೃಷ್ಟಿಯಿಂದ ಸಹಾಯ ಮಾಡಲು ಹೋದದ್ದನ್ನು ತಪ್ಪಾಗಿ ಬಿಂಬಿಸಲಾಗಿದೆ. ಈಗಾಗಲೇ ನಮ್ಮ ಕುಟುಂಬ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಇಂತಹ ಪರಿಶೀಲಿಸದ ಸುದ್ದಿಗಳು ನಮಗೆ ಮತ್ತಷ್ಟು ಆತಂಕವನ್ನು ಉಂಟುಮಾಡುತ್ತವೆ. ದಯವಿಟ್ಟು ಮಾಧ್ಯಮಗಳು ಮತ್ತು ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಹಾಗೂ ಹಂಚಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪ್ರಕರಣ ಅಥವಾ ದೂರು ದಾಖಲಾಗಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

Read More
Next Story