4 ರಾಷ್ಟ್ರ ಪ್ರಶಸ್ತಿ ವಿಜೇತೆ ಎಸ್. ಜಾನಕಿ ಪದ್ಮಭೂಷಣವನ್ನು ಏಕೆ ಸ್ವೀಕರಿಸಲಿಲ್ಲ?
ದಕ್ಷಿಣ ಭಾರತದ ಗಾನಕೋಗಿಲೆ, ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ವಿಜೇತೆ ಎಸ್. ಜಾನಕಿ ಅವರು ತಮ್ಮ ಸುಮಧುರ ಕಂಠದಿಂದ ಐದು ದಶಕಗಳಿಗೂ ಹೆಚ್ಚು ಕಾಲ ಲಕ್ಷಾಂತರ ಸಂಗೀತಾಭಿಮಾನಿಗಳ ಮನ ಗೆದ್ದಿದ್ದರು.
ದಕ್ಷಿಣ ಭಾರತದ ಗಾನಕೋಗಿಲೆ, ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ವಿಜೇತೆ ಎಸ್. ಜಾನಕಿ ಅವರು ತಮ್ಮ ಸುಮಧುರ ಕಂಠದಿಂದ ಐದು ದಶಕಗಳಿಗೂ ಹೆಚ್ಚು ಕಾಲ ಲಕ್ಷಾಂತರ ಸಂಗೀತಾಭಿಮಾನಿಗಳ ಮನ ಗೆದ್ದಿದ್ದರು. ಇದೀಗ ಅವರು ಇಹಲೋಕ ತ್ಯಜಿಸಿದ್ದಾರೆ.
ತಮಿಳು, ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ಸಾವಿರಾರು ಎವರ್ಗ್ರೀನ್ ಹಾಡುಗಳನ್ನು ಹಾಡಿದ ಅವರು, 2013ರಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ಸ್ವೀಕರಿಸಲು ನಿರಾಕರಿಸಿದ್ದರು. ತಮಗೆ ಈ ಗೌರವ ತುಂಬಾ ತಡವಾಗಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದ ಜಾನಕಿಯಮ್ಮ, ದಕ್ಷಿಣ ಭಾರತದ ಕಲಾವಿದರಿಗೆ ಸಮರ್ಪಕ ಗೌರವ ಸಿಗುತ್ತಿಲ್ಲ ಎಂಬ ಅಸಮಾಧಾನವನ್ನೂ ವ್ಯಕ್ತಪಡಿಸಿದ್ದರು.
Next Story

