Todays Kannada Live News Mar 27: ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ನಲ್ಲಿ ಅಚ್ಚರಿ ಬೆಳವಣಿಗೆ
x

ಸಿಎಂ ಸಿದ್ದರಾಮಯ್ಯ ಹಾಗೂ ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಸಾದಿಕ್‌ ಪೈಲ್ವಾನ್‌

Today's Kannada Live News Mar 27: ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ನಲ್ಲಿ ಅಚ್ಚರಿ ಬೆಳವಣಿಗೆ

ರಾಜ್ಯ, ಭಾರತ ಮತ್ತು ಜಗತ್ತಿನಾದ್ಯಂತ ನಡೆಯುತ್ತಿರುವ ಅತ್ಯಂತ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ನೋಟ ಇಲ್ಲಿದೆ.


Click the Play button to hear this message in audio format

ಇಂದು ಶುಕ್ರವಾರ ಮಾರ್ಚ್ 27, 2026. ಭಾರತದ ರಾಜಕೀಯ, ಆರ್ಥಿಕ ಮತ್ತು ಸಾಂಸ್ಕೃತಿಕ ವಲಯಗಳಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇಂದಿನ ಪಮುಖ ಮತ್ತು ಟ್ರೆಂಡಿಂಗ್ ಸುದ್ದಿಗಳ ಸಮಗ್ರ ನೋಟ ಇಲ್ಲಿದೆ.

Live Updates

  • ಸಂಸದರು, ಶಾಸಕರಿಗೆ ಟಿಕೆಟ್‌: ಕೆಎಸ್‌ಸಿಎ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಚರ್ಚೆ
    27 March 2026 3:35 PM IST

    ಸಂಸದರು, ಶಾಸಕರಿಗೆ ಟಿಕೆಟ್‌: ಕೆಎಸ್‌ಸಿಎ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಚರ್ಚೆ

    ಸಂಸದರು ಹಾಗೂ ಶಾಸಕರಿಗೆ ಐಪಿಎಲ್ ಕ್ರಿಕೆಟ್ ಟಿಕೆಟ್ ನೀಡಬೇಕು ಹಲವು ಶಾಸಕರು ಗುರುವಾರ(ಮಾ.26) ಸದನದಲ್ಲಿ ಧ್ವನಿ ಎತ್ತಿದ್ದರು. ಈ ಕುರಿತು ಟಿಕೆಟ್‌ ವಿತರಣೆ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಕಾರ್ಯದರ್ಶಿ ವಿನಯ್ ಸೇರಿದಂತೆ ಪೊಲೀಸ್‌ ಅಧಿಕಾರಿಗಳ ಜತೆ ವಿಧಾನಸೌಧದಲ್ಲಿ ಶುಕ್ರವಾರ ಸಮಾಲೋಚನೆ ನಡೆಸಿದರು.

  • ಸಿಎಂ ಭೇಟಿ ಮಾಡಿದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಸಾದಿಕ್‌ ಪೈಲ್ವಾನ್‌ : ಪಕ್ಷದ ಪರವಾಗಿ ಕೆಲಸ ಮಾಡಲು ಒಪ್ಪಿಗೆ
    27 March 2026 3:20 PM IST

    ಸಿಎಂ ಭೇಟಿ ಮಾಡಿದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಸಾದಿಕ್‌ ಪೈಲ್ವಾನ್‌ : ಪಕ್ಷದ ಪರವಾಗಿ ಕೆಲಸ ಮಾಡಲು ಒಪ್ಪಿಗೆ

    ದಾವಣಗೆರೆ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಾದಿಕ್ ಪೈಲ್ವಾನ್ ಅವರು ಶುಕ್ರವಾರ (ಮಾ.27) ತಮ್ಮ ಬೆಂಬಲಿಗರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

    ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತಿಗೆ ಒಪ್ಪಿದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ ಅಭ್ಯರ್ಥಿ ಸಾದಿಕ್‌ ಪೈಲ್ವಾನ್‌, ಪಕ್ಷದ ಅಭ್ಯರ್ಥಿ ಸಮರ್ಥ್‌ ಮಲ್ಲಿಕಾರ್ಜುನ್‌ ಪರವಾಗಿ ಕೆಲಸ ಮಾಡಲು ಒಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಕೋಪದಲ್ಲಿ ನಾಮಪತ್ರ‌ ಸಲ್ಲಿಸಿದ್ದೆ, ನಿಮ್ಮ ಜೊತೆಗಿನ ಮಾತುಕತೆ ಸಮಾಧಾನ ತಂದಿದೆ. ಈಗಿನಿಂದಲೇ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇನೆ. ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬಾರದು, ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆಂದು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತಿಳಿಸಿದ್ದಾರೆ.

  • ಕೇರಳ ಚುನಾವಣೆ| ಮುಸ್ಲಿಂ ಧರ್ಮಗುರುಗಳನ್ನು ಭೇಟಿ ಮಾಡಿದ ಸಚಿವ ಜಮೀರ್‌
    27 March 2026 3:08 PM IST

    ಕೇರಳ ಚುನಾವಣೆ| ಮುಸ್ಲಿಂ ಧರ್ಮಗುರುಗಳನ್ನು ಭೇಟಿ ಮಾಡಿದ ಸಚಿವ ಜಮೀರ್‌

    ಕೇರಳ ಚುನಾವಣೆ ಪ್ರಚಾರದಲ್ಲಿರುವ ಸಚಿವ ಜಮೀರ್ ಅಹಮದ್ ಖಾನ್ ಅವರು ಕ್ಯಾಲಿಕಟ್‌ನಲ್ಲಿ ಮರ್ಕಜ್‌ಗೆ ಭೇಟಿ ನೀಡಿ ಮುಸ್ಲಿಂ ಧರ್ಮಗುರು ಎ.ಪಿ. ಉಸ್ತಾದ್ ಅವರ ಜತೆ ಹಲವು ವಿಷಯಗಳ ಜತೆ ಸಮಾಲೋಚನೆ ನಡೆಸಿದರು. ಈ ವೇಳೆ ಮೌಲಾನಾ ಶಾಫಿ ಸಾದಿ ಉಪಸ್ಥಿತರಿದ್ದರು.

  • 27 March 2026 7:38 AM IST

    ಜಿ7 ಶೃಂಗಸಭೆ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಸುಧಾರಣೆಗೆ ಜೈಶಂಕರ್ ಆಗ್ರಹ

    ಫ್ರಾನ್ಸ್‌ನಲ್ಲಿ ಆಯೋಜಿಸಲಾದ ಜಿ7 ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಂಡ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು, ಜಾಗತಿಕ ಆಡಳಿತ ಸುಧಾರಣೆ, ವಿಶ್ವಸಂಸ್ಥೆಯ ಶಾಂತಿ ಪಾಲನಾ ಕಾರ್ಯಾಚರಣೆಗಳನ್ನು ವ್ಯವಸ್ಥಿತಗೊಳಿಸುವುದು ಮತ್ತು ಮಾನವೀಯ ಪೂರೈಕೆ ಸರಪಳಿಗಳನ್ನು ಬಲಪಡಿಸುವ ಅಗತ್ಯವನ್ನು ಒತ್ತಿಹೇಳಿದ್ದಾರೆ. ವಿಶೇಷವಾಗಿ 'ಗ್ಲೋಬಲ್ ಸೌತ್' (ಅಭಿವೃದ್ಧಿಶೀಲ ರಾಷ್ಟ್ರಗಳು) ಎದುರಿಸುತ್ತಿರುವ ಇಂಧನ ಸವಾಲುಗಳು, ರಸಗೊಬ್ಬರ ಪೂರೈಕೆ ಮತ್ತು ಆಹಾರ ಭದ್ರತೆಯ ಬಗ್ಗೆ ಭಾರತದ ಕಳಕಳಿಯನ್ನು ಅವರು ಜಾಗತಿಕ ವೇದಿಕೆಯಲ್ಲಿ ಪ್ರಸ್ತಾಪಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತವು ಖಾಯಂ ಸದಸ್ಯತ್ವಕ್ಕೆ ಅರ್ಹವಾಗಿದೆ ಎಂದು ಪ್ರತಿಪಾದಿಸುತ್ತಾ ಬಂದಿರುವ ಅವರು, ಪ್ರಸ್ತುತ ಐದು ರಾಷ್ಟ್ರಗಳಷ್ಟೇ (ಚೀನಾ, ಫ್ರಾನ್ಸ್, ರಷ್ಯಾ, ಬ್ರಿಟನ್ ಮತ್ತು ಅಮೆರಿಕ) ಹೊಂದಿರುವ 'ವೀಟೋ' ಅಧಿಕಾರ ಮತ್ತು ಮಂಡಳಿಯ ರಚನೆಯಲ್ಲಿ ಬದಲಾವಣೆಯಾಗಬೇಕು ಎಂದು ಕರೆ ನೀಡಿದರು.

  • 27 March 2026 7:36 AM IST

    ಇರಾನ್ ಯುದ್ಧಕ್ಕೆ ಶಾಂತಿಯುತ ಅಂತ್ಯ ಹಾಡಲು ಎಲ್ಲಾ ಪಾಲುದಾರರೊಂದಿಗೆ ಪಾಕಿಸ್ತಾನ ಸಕ್ರಿಯ ಮಾತುಕತೆ

    ಇರಾನ್ ಯುದ್ಧವನ್ನು ಶಾಂತಿಯುತವಾಗಿ ಕೊನೆಗಾಣಿಸಲು ಪಾಕಿಸ್ತಾನವು ಪ್ರಾದೇಶಿಕ ಮತ್ತು ಜಾಗತಿಕ ಮಟ್ಟದ ಎಲ್ಲಾ ಪಾಲುದಾರರೊಂದಿಗೆ "ಸಕ್ರಿಯವಾಗಿ ಮತ್ತು ರಚನಾತ್ಮಕವಾಗಿ ತೊಡಗಿಸಿಕೊಂಡಿದೆ" ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ಗುರುವಾರ ತಿಳಿಸಿದೆ. ಮುಂಬರುವ ವಾರಾಂತ್ಯದಲ್ಲಿ ಇಸ್ಲಾಮಾಬಾದ್‌ನಲ್ಲಿ ಮುಖಾಮುಖಿ ಮಾತುಕತೆಗಳು ನಡೆಯುವ ಸಾಧ್ಯತೆಯ ಬಗ್ಗೆ ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್ ಅಂದ್ರಾಬಿ ಅವರನ್ನು ಪ್ರಶ್ನಿಸಿದಾಗ, ಅವರು ನೇರ ಮಾತುಕತೆಗಳ ಬಗ್ಗೆ ಖಚಿತಪಡಿಸಲು ನಿರಾಕರಿಸಿದರೂ ಸಹ, ಮಾತುಕತೆಯ ಮೂಲಕ ಶಾಂತಿ ಸ್ಥಾಪಿಸಲು ಪಾಕಿಸ್ತಾನವು ಸರ್ವತೋಮುಖ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಒತ್ತಿ ಹೇಳಿದರು. ಪ್ರಧಾನಿ ಶೆಹಬಾಜ್ ಷರೀಫ್ ಅವರು ವೈಯಕ್ತಿಕವಾಗಿ ಈ ರಾಜತಾಂತ್ರಿಕ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದು, ತಕ್ಷಣದ ಉದ್ವಿಗ್ನತೆ ಶಮನ, ಹಗೆತನದ ನಿಲುಗಡೆ ಮತ್ತು ಶಾಂತಿಯುತ ಪರಿಹಾರದತ್ತ ದೃಢವಾದ ಹಾದಿಯನ್ನು ನಿರ್ಮಿಸಲು ಪಾಕಿಸ್ತಾನವು ನಿರಂತರವಾಗಿ ಪ್ರತಿಪಾದಿಸುತ್ತಿದೆ ಎಂದು ವಕ್ತಾರರು ವಿವರಿಸಿದ್ದಾರೆ.

  • 27 March 2026 7:33 AM IST

    ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್‌ಗೆ ಟ್ರಂಪ್ ನೀಡಿದ್ದ ಗಡುವು ಏಪ್ರಿಲ್ 6ಕ್ಕೆ ವಿಸ್ತರಣೆ

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಇರಾನ್‌ಗೆ ನೀಡಿದ್ದ ಗಡುವನ್ನು ಏಪ್ರಿಲ್ 6ರವರೆಗೆ ವಿಸ್ತರಿಸಿದ್ದು, ಅಲ್ಲಿಯವರೆಗೆ ಇರಾನ್‌ನ ಇಂಧನ ಸ್ಥಾವರಗಳ ಮೇಲೆ ಬಾಂಬ್ ದಾಳಿ ನಡೆಸುವುದಿಲ್ಲ ಎಂದು ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ. ಕದನ ವಿರಾಮ ಮಾತುಕತೆಗಳ ವಿಷಯದಲ್ಲಿ ಎರಡೂ ರಾಷ್ಟ್ರಗಳ ನಡುವೆ ಬಿಕ್ಕಟ್ಟು ಮುಂದುವರಿದಿದ್ದು, ಇತ್ತ ಅಮೆರಿಕವು ಸಾವಿರಾರು ಸೈನಿಕರನ್ನು ಈ ಪ್ರದೇಶಕ್ಕೆ ರವಾನಿಸುತ್ತಿದ್ದರೆ, ಅತ್ತ ಇಸ್ರೇಲ್ ದಕ್ಷಿಣ ಲೆಬನಾನ್‌ನಲ್ಲಿ ಇರಾನ್ ಬೆಂಬಲಿತ ಹಿಜ್ಬುಲ್ಲಾ ಉಗ್ರರ ವಿರುದ್ಧ ಹೋರಾಡಲು ಹೆಚ್ಚಿನ ಪಡೆಗಳನ್ನು ನಿಯೋಜಿಸಿದೆ. ಇದರ ನಡುವೆ, ಇರಾನ್ ಹಾರ್ಮುಜ್ ಜಲಸಂಧಿಯ ಮೇಲೆ ತನ್ನ ಹಿಡಿತವನ್ನು ಬಿಗಿಗೊಳಿಸಿದೆ ಮತ್ತು ಇರಾನ್‌ನಿಂದ ಉಡಾವಣೆಯಾದ ಕ್ಷಿಪಣಿಗಳ ಕುರಿತು ಇಸ್ರೇಲ್‌ನಲ್ಲಿ ಎಚ್ಚರಿಕೆ ಗಂಟೆಗಳು ಮೊಳಗುತ್ತಿವೆ; ಅಲ್ಲದೆ ಇರಾನ್‌ನ ರಾಜಧಾನಿ ಟೆಹ್ರಾನ್ ಸೇರಿದಂತೆ ಪ್ರಮುಖ ನಗರಗಳ ಮೇಲೆ ಭಾರಿ ವೈಮಾನಿಕ ದಾಳಿಗಳು ನಡೆದಿರುವ ಬಗ್ಗೆ ವರದಿಯಾಗಿದೆ.

Read More
Next Story