ನೀಟ್ ಪೇಪರ್ ಸೋರಿಕೆ ಅಕ್ರಮ: ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ವಾಂಗ್‌ಚುಕ್‌ ಸರ್ಕಾರಕ್ಕೆ 3 ಕಠಿಣ ಷರತ್ತು
x

ಸೋನಮ್ ವಾಂಗ್‌ಚುಕ್‌

ನೀಟ್ ಪೇಪರ್ ಸೋರಿಕೆ ಅಕ್ರಮ: ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ವಾಂಗ್‌ಚುಕ್‌ ಸರ್ಕಾರಕ್ಕೆ 3 ಕಠಿಣ ಷರತ್ತು

ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್‌, ತಮ್ಮ3 ಪ್ರಮುಖ ಷರತ್ತುಗಳನ್ನು ಈಡೇರಿಸಿದರೆ ಮಾತ್ರ ಇಂದು ಹಸಿವು ತಡೆ ಅಂತ್ಯಗೊಳಿಸುವುದಾಗಿ ತಿಳಿಸಿದ್ದಾರೆ.


Click the Play button to hear this message in audio format

ಇತ್ತೀಚೆಗೆ ನಡೆದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಕಳೆದ 20ಕ್ಕೂ ಹೆಚ್ಚು ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್‌ಚುಕ್‌ ತಮ್ಮ ಮೂರು ಪ್ರಮುಖ ಷರತ್ತುಗಳನ್ನು ಈಡೇರಿಸಿದರೆ ಮಾತ್ರ ಇಂದು ಉಪವಾಸ ಅಂತ್ಯಗೊಳಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು 'ಎಕ್ಸ್' ಖಾತೆಯಲ್ಲಿ ಹಸ್ತಪ್ರತಿ ಪತ್ರವೊಂದನ್ನು ಹಂಚಿಕೊಂಡಿರುವ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಂಭವಿಸಿರುವ ವೈಫಲ್ಯಗಳು ಹಾಗೂ ಇತ್ತೀಚೆಗೆ ನಡೆದ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸಂಪೂರ್ಣ ಹೊಣೆಯನ್ನು ಕೇಂದ್ರ ಸರ್ಕಾರ ಹೊರಬೇಕು ಎಂಬುದು ಅವರ ಮೊದಲ ಷರತ್ತಾಗಿದೆ.

ಸಂಸತ್ತಿನಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವನ್ನು ಗಂಭೀರವಾಗಿ ಪ್ರಸ್ತಾಪಿಸುವುದಾಗಿ ರಾಜಕೀಯ ನಾಯಕರು ತಮಗೆ ಭರವಸೆ ನೀಡಬೇಕು ಎಂಬುದು ಅವರ ಎರಡನೇ ಬೇಡಿಕೆಯಾಗಿದೆ. ಇನ್ನು ಮೂರನೇ ಷರತ್ತಾಗಿ, ಆರೋಗ್ಯ ಸಮಸ್ಯೆ ಅಥವಾ ಇತರ ಕಾರಣಗಳಿಂದಾಗಿ ಇಂದು ನಡೆಯಲಿರುವ ಸಂಸತ್ ಚಲೋ ಮೆರವಣಿಗೆಯಲ್ಲಿ ತಮಗೆ ಪಾಲ್ಗೊಳ್ಳಲು ಸಾಧ್ಯವಾಗದಿದ್ದರೆ, ಪ್ರಮುಖ ರಾಜಕೀಯ ನಾಯಕರು ಆಸ್ಪತ್ರೆಗೆ ಆಗಮಿಸಿ ತಮ್ಮ ಉಳಿದೆರಡು ಬೇಡಿಕೆಗಳ ಈಡೇರಿಕೆಯ ಭರವಸೆ ನೀಡಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ

Read More
Next Story