ನಾಗೇಂದ್ರ ರಾಜೀನಾಮೆಗೆ ಸಿಟಿ ರವಿ ಆಗ್ರಹ
ಬಿಜೆಪಿ ನಾಯಕ ಸಿ.ಟಿ. ರವಿ, ಸಚಿವ ನಾಗೇಂದ್ರ ಮರುನೇಮಕವನ್ನು ಟೀಕಿಸಿ ವಾಲ್ಮೀಕಿ ನಿಗಮದ ಹಣ ಅಕ್ರಮ ಪ್ರಕರಣದ ತನಿಖೆ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಅವರು ಪಕ್ಷದ ನೂತನ ಉಪಾಧ್ಯಕ್ಷರ ನೇಮಕ ಹಾಗೂ ಸಚಿವ ನಾಗೇಂದ್ರ ಮರುನೇಮಕದ ಕುರಿತು ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ನೂತನ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಅವರು, ಒಗ್ಗಟ್ಟಿನ ಹೋರಾಟದ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ಪ್ರಕರಣವನ್ನು ಪ್ರಸ್ತಾಪಿಸಿದ ಸಿ.ಟಿ. ರವಿ, ನಾಗೇಂದ್ರ ವಿರುದ್ಧ ಗಂಭೀರ ಆರೋಪಗಳಿದ್ದು, ತನಿಖೆ ಮತ್ತು ಕಾನೂನು ಕ್ರಮಗಳು ನಡೆದಿವೆ ಎಂದು ಹೇಳಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದನ್ನು ಅವರು ಟೀಕಿಸಿದ್ದಾರೆ. ಪರಿಶಿಷ್ಟ ಪಂಗಡಗಳ ಸಮುದಾಯದ ಹಿತಾಸಕ್ತಿಯನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿದೆ ಎಂದು ಸಿ.ಟಿ. ರವಿ ಆರೋಪಿಸಿದ್ದಾರೆ.
Next Story

