ತಿರುಮಲದಲ್ಲಿ ಹಾರ್ದಿಕ್ ಪಾಂಡ್ಯ
ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.
ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಮುಂಜಾನೆ ನಡೆದ ಸುಪ್ರಭಾತ ಸೇವೆಯಲ್ಲಿ ಪಾಲ್ಗೊಂಡ ಹಾರ್ದಿಕ್, ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ಬಳಿಕ ದೇವಸ್ಥಾನದ ಅಧಿಕಾರಿಗಳು ಅವರಿಗೆ ತೀರ್ಥಪ್ರಸಾದ ನೀಡಿ ಗೌರವಿಸಿದರು. ಹಾರ್ದಿಕ್ ಪಾಂಡ್ಯ ಅವರ ತಿರುಮಲ ಭೇಟಿ ಹಾಗೂ ದೇವರ ದರ್ಶನದ ವಿಶೇಷ ದೃಶ್ಯಗಳು ಈ ವಿಡಿಯೋದಲ್ಲಿವೆ.
Next Story

