ವಿಜಯ್ ಪ್ರತಿಕೃತಿ ದಹಿಸಿದ ಕನ್ನಡಿಗರು
ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆನೇಕಲ್ನಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕರ್ನಾಟಕದ ಹಿತಾಸಕ್ತಿ ಕಾಪಾಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿವೆ.
ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಆನೇಕಲ್ನಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಪ್ರತಿಕೃತಿ ಅಂತ್ಯಕ್ರಿಯೆ ನಡೆಸಿ, ಪೋಸ್ಟರ್ಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯ ಪ್ರಮುಖ ಬೆಳವಣಿಗೆಗಳು ಹಾಗೂ ಪ್ರತಿಭಟನಾಕಾರರ ಪ್ರತಿಕ್ರಿಯೆ ಈ ವಿಡಿಯೋದಲ್ಲಿದೆ.
Next Story

