ಕಾವೇರಿ ಸರ್ವಪಕ್ಷ ಸಭೆಗೆ ಮೈಸೂರು ಸಂಸದ ಯದುವೀರ್ ಆಗಮನ; 'ಕೃಷ್ಣಾ'ದಲ್ಲಿ ನಾಯಕರ ಸಮಾಗಮ
ಕಾವೇರಿ ನೀರು ವಿವಾದದ ಕುರಿತು ಬೆಂಗಳೂರಿನಲ್ಲಿ ನಡೆದ ಸರ್ವಪಕ್ಷ ಸಭೆಗೆ ಸಂಸದ ಯದುವೀರ್ ಒಡೆಯರ್ ಆಗಮಿಸಿದರು. ರಾಜ್ಯದ ಮುಂದಿನ ಕಾನೂನು ಹೋರಾಟದ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ.
ಕಾವೇರಿ ನೀರು ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಎಂ ಗೃಹ ಕಚೇರಿ 'ಕೃಷ್ಣಾ'ದಲ್ಲಿ ನಡೆದ ಸರ್ವಪಕ್ಷ ಸಭೆಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ವೀರಪ್ಪ ಮೊಯ್ಲಿ, ಡಿ.ವಿ. ಸದಾನಂದಗೌಡ ಹಾಗೂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದರು. ಕಾವೇರಿ ವಿಚಾರದಲ್ಲಿ ರಾಜ್ಯದ ಒಗ್ಗಟ್ಟಿನ ನಿಲುವು, ಮುಂದಿನ ಕಾನೂನು ಹೋರಾಟ ಹಾಗೂ ಕೇಂದ್ರದ ಮುಂದೆ ಮಂಡಿಸಬೇಕಾದ ಅಭಿಪ್ರಾಯಗಳ ಕುರಿತು ಮಹತ್ವದ ಚರ್ಚೆ ನಡೆಯುವ ನಿರೀಕ್ಷೆಯಿದೆ. ಯದುವೀರ್ ಆಗಮನದ ವಿಶೇಷ ದೃಶ್ಯಗಳು ಈ ವಿಡಿಯೊದಲ್ಲಿವೆ.
Next Story

