ಖಾತೆಗಾಗಿ ಕಿತ್ತಾಟ... ಜನರಿಗೆ ಸಂಕಟ? ರಾಜ್ಯದಲ್ಲಿ ಡಿಕೆಶಿ ಆಡಳಿತ ಅಸ್ತವ್ಯಸ್ತ?
ಕರ್ನಾಟಕದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಮೊದಲ ಹಂತದಲ್ಲಿ 13 ಸಚಿವರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಇನ್ನೂ 20 ಸಚಿವ ಸ್ಥಾನಗಳು ಖಾಲಿ ಉಳಿದಿದ್ದು, ಖಾತೆಗಳಿಗಾಗಿ ಪೈಪೋಟಿ, ದೆಹಲಿ ಲಾಬಿ ಮತ್ತು ಸಚಿವರ ಅಸಮಾಧಾನ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಶಿಕ್ಷಣ ಇಲಾಖೆ ಸೇರಿದಂತೆ ಹಲವು ಪ್ರಮುಖ ಇಲಾಖೆಗಳಿಗೆ ಇನ್ನೂ ಸಚಿವರ ನೇಮಕವಾಗಿಲ್ಲ. ಶಾಲೆಗಳು ಆರಂಭವಾಗಿದ್ದರೂ ಶಿಕ್ಷಣ ಇಲಾಖೆಗೆ ನಾಯಕತ್ವದ ಕೊರತೆ ಎದುರಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ಹಾಸ್ಟೆಲ್ಗಳು, ವಿದ್ಯಾರ್ಥಿವೇತನ ಮತ್ತು ಇತರೆ ಯೋಜನೆಗಳ ಮೇಲೂ ಇದರ ಪರಿಣಾಮ ಬೀಳುವ ಆತಂಕ ವ್ಯಕ್ತವಾಗಿದೆ. ಇದರ ಜೊತೆಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ವಿಚಾರದಲ್ಲಿ ರಾಜಕೀಯ ಚರ್ಚೆಗಳು ಜೋರಾಗಿದ್ದು, ರಾಜಧಾನಿಯ ರಸ್ತೆ, ಸಂಚಾರ, ಮಳೆ ನೀರು ನಿರ್ವಹಣೆ ಸೇರಿದಂತೆ ಹಲವು ಸಮಸ್ಯೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಹಾಗಾದರೆ ಖಾತೆಗಳಿಗಾಗಿ ನಡೆಯುತ್ತಿರುವ ರಾಜಕೀಯ ಪೈಪೋಟಿ ಆಡಳಿತದ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತಿದೆಯೇ? ಸಚಿವ ಸಂಪುಟದ ವಿಳಂಬದಿಂದ ಜನರ ಸಮಸ್ಯೆಗಳು ಕಡೆಗಣನೆಯಾಗುತ್ತಿವೆಯೇ? ಈ ಎಲ್ಲ ವಿಚಾರಗಳ ಕುರಿತ ಸಂಪೂರ್ಣ ವಿಶ್ಲೇಷಣೆ ಈ ವಿಡಿಯೋದಲ್ಲಿ.

ಕರ್ನಾಟಕದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಮೊದಲ ಹಂತದಲ್ಲಿ 13 ಸಚಿವರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಇನ್ನೂ 20 ಸಚಿವ ಸ್ಥಾನಗಳು ಖಾಲಿ ಉಳಿದಿದ್ದು, ಖಾತೆಗಳಿಗಾಗಿ ಪೈಪೋಟಿ, ದೆಹಲಿ ಲಾಬಿ ಮತ್ತು ಸಚಿವರ ಅಸಮಾಧಾನ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಶಿಕ್ಷಣ ಇಲಾಖೆ ಸೇರಿದಂತೆ ಹಲವು ಪ್ರಮುಖ ಇಲಾಖೆಗಳಿಗೆ ಇನ್ನೂ ಸಚಿವರ ನೇಮಕವಾಗಿಲ್ಲ. ಶಾಲೆಗಳು ಆರಂಭವಾಗಿದ್ದರೂ ಶಿಕ್ಷಣ ಇಲಾಖೆಗೆ ನಾಯಕತ್ವದ ಕೊರತೆ ಎದುರಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ಹಾಸ್ಟೆಲ್ಗಳು, ವಿದ್ಯಾರ್ಥಿವೇತನ ಮತ್ತು ಇತರೆ ಯೋಜನೆಗಳ ಮೇಲೂ ಇದರ ಪರಿಣಾಮ ಬೀಳುವ ಆತಂಕ ವ್ಯಕ್ತವಾಗಿದೆ.
ಇದರ ಜೊತೆಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ವಿಚಾರದಲ್ಲಿ ರಾಜಕೀಯ ಚರ್ಚೆಗಳು ಜೋರಾಗಿದ್ದು, ರಾಜಧಾನಿಯ ರಸ್ತೆ, ಸಂಚಾರ, ಮಳೆ ನೀರು ನಿರ್ವಹಣೆ ಸೇರಿದಂತೆ ಹಲವು ಸಮಸ್ಯೆಗಳು ಮತ್ತೆ ಮುನ್ನೆಲೆಗೆ ಬಂದಿವೆ.
ಹಾಗಾದರೆ ಖಾತೆಗಳಿಗಾಗಿ ನಡೆಯುತ್ತಿರುವ ರಾಜಕೀಯ ಪೈಪೋಟಿ ಆಡಳಿತದ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತಿದೆಯೇ? ಸಚಿವ ಸಂಪುಟದ ವಿಳಂಬದಿಂದ ಜನರ ಸಮಸ್ಯೆಗಳು ಕಡೆಗಣನೆಯಾಗುತ್ತಿವೆಯೇ? ಈ ಎಲ್ಲ ವಿಚಾರಗಳ ಕುರಿತ ಸಂಪೂರ್ಣ ವಿಶ್ಲೇಷಣೆ ಈ ವಿಡಿಯೋದಲ್ಲಿ.

